ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ : ವಕೀಲರಿಂದ ಉಲ್ಲೇಖ -Vishwanews24
ನವದೆಹಲಿ: ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಪ್ರಕರಣದ ಕುರಿತ ಪ್ರಮುಖ ಅರ್ಜಿದಾರರಾದ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಎಎಸ್ಐ ವರದಿಯನ್ನು ಉಲ್ಲೇಖಿಸಿ ವಾದ ಮಂಡಿಸಿದ ಅವರು ಎಎಸ್ಐ ವರದಿಯು ಮುಸ್ಲಿಂ ಸಂಸ್ಕೃತಿಗೆ ಹೊರತಾದ ಮೊಸಳೆಗಳು ಮತ್ತು ಆಮೆಗಳ ಚಿತ್ರವು ಮಸೀದಿಯಲ್ಲಿರುವುದನ್ನು ಅಂಕಿ ಸಂಖ್ಯೆಗಳ ಸಮೇತ ಹೇಳುತ್ತಿದೆ ಎಂದಿದ್ದಾರೆ.
ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ರಾಮ್ ರಾಮ್ ಲಲ್ಲಾ ಪರ ವಾದ ಮಂಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣದ ಎಂಟನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರು ವಾದ ಮುಂದುವರಿಸಿದ್ದಾರೆ.
ಹಿರಿಯ ವಕೀಲರು ಎಎಸ್ಐನ ವರದಿಯಿಂದ ಇತರ ಪುರಾತತ್ತ್ವ ಶಾಸ್ತ್ರದ ಪುರಾವೆಗಳನ್ನು ಉಲ್ಲೇಖಿಸಿ ವಿವಾದಿತ ಪ್ರದೇಶದಲ್ಲಿ ಹಿಂದೂ ದೇವಾಲಯವೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
