ಮಹತ್ವದ ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿಯಿಂದ ಇಂದು ಚಾಲನೆ

Featured, ರಾಷ್ಟ್ರ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್​ ಭಾರತ್​ ಯೋಜನೆಗೆ ಜಾರ್ಖಂಡ್​​ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.

ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್​ 25 ಪಂಡಿತ್​ ದೀನ್​ ದಯಾಳ್​ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.

ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.