ಮಹಾಭಾರತ ರಚಿಸಿರುವ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ : ಪೇಜಾವರ ಶ್ರೀ -Vishwanews24

Featured, ರಾಜ್ಯ ನ್ಯೂಸ್

ಧಾರವಾಡ : ಮಹಾಭಾರತ ರಚಿಸಿರುವ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ. ಉಳಿದವರು ಅನೇಕ ದೊಡ್ಡ ವ್ಯಕ್ತಿಗಳಿದ್ದರೂ ಅವರೆಲ್ಲ ರಾಷ್ಟ್ರಪುತ್ರರು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಮಹಾಭಾರತದಲ್ಲಿ ಎಲ್ಲವೂ ಅಡಗಿದೆ. ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ತತ್ವಶಾಸ್ತ್ರ, ವೇ ದಾಂತ ಹೀಗೆ ಎಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಹೇಳಿಕೊಟ್ಟಿದ್ದಾರೆ. ರಾಜಕಾರಣ ಹೇಗಿರಬೇಕು. ರಾಜನಾದವರು ದೇಶ ಪರಿಪಾಲನೆ ಹೇಗೆ ಮಾಡಬೇಕು ಎಂಬುದೆಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಪರಿಚಯ ಮಾಡಿಕೊಟ್ಟಿದ್ದಾರೆ. ಹೀಗಾಗಿ ವೇದವ್ಯಾಸರೊಬ್ಬರೇ ದೇಶದ ರಾಷ್ಟ್ರಪಿತ ಎಂದು ಹೇಳಿದರು.

ಪ್ರಧಾನಿ ಮೋದಿ ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಬಹುಮತ ಪಡೆದು ಎರಡನೇ ಬಾರಿ ಸಂಸತ್ ಪ್ರವೇಶ ಮಾಡುತ್ತಿದ್ದಾರೆ.

ಹಾಗಾಗಿ ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ರಾಜ್ಯಸಭೆಯಲ್ಲಿ ಬಹುಮತ ಬರಲಿದ್ದು, ರಾಮಮಂದಿರ ನಿರ್ಮಾಣ ಆಗಲಿದೆ ಎಂಬ ಪೂರ್ಣ ಭರವಸೆಯನ್ನು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.