ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

Featured, ರಾಜ್ಯ ನ್ಯೂಸ್

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು ಕರ್ನಾಟಕದಲ್ಲೂ ಆತಂಕದ ವಾತಾವರಣ ನಿರ್ಮಾನ ಆಗಿದೆ. ಅದರಲ್ಲೂ ಇವೆರಡು ರಾಜ್ಯಗಳಿಗೆ ಕರ್ನಾಟಕಕ್ಕೆ ಬರುವವರಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ.

ರೂಪಾಂತರ ಹೊಂದಿರುವ ಕೋವಿಡ್ ನೆರೆ ರಾಜ್ಯಗಳಲ್ಲಿ ತನ್ನ ಅಬ್ಬರವನ್ನು ತೋರಿಸುತ್ತಿದೆ. ಕೇರಳದಿಂದ ಬೆಂಗಳೂರಿಗೆ ಬಂದವರಿಂದ ಎರಡು ಕಡೆಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಮಂಗಳನ ಅಂಗಳದಲ್ಲಿ ರೋವರ್ ಯಶಸ್ವಿಯಾಗಿ ಇಳಿಸಿದ್ದು ಭಾರತೀಯ ಮೂಲದ ವಿಜ್ಞಾನಿ ಸ್ವಾತಿ ಮೋಹನ್ -Vishwanews24

ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಸದ್ಯ ನಿಯಂತ್ರಣದಲ್ಲಿ ಇದ್ದರೂ ಆತಂಕ ಶುರುವಾಗಿದೆ. ಶುಕ್ರವಾರ ಪ್ರಕಟಗೊಂಡ ಅಂಕಿ -ಅಂಶಗಳ ಪ್ರಕಾರ ವರದಿಯಾದ ಹೊಸ ಪ್ರಕರಣಗಳು – 386, ಈ ವರೆಗೆ ಇರುವ ಸಕ್ರೀಯ ಪ್ರಕರಣಗಳು 5882 ಹಾಗೂ ಫೆ. 18 ರಂದು ಕೋವಿಡ್‌ನಿಂದ 5 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೋವಿಡ್ ಸೋಂಕಿಂದ – 12,287 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಒಟ್ಟು ಕೋವಿಡ್ ಪ್ರಕರಣಗಳ ಖಚಿತ ಸಂಖ್ಯೆ 947246 ರಷ್ಟಿದೆ. 125 ಮಂದಿ ಕೋವಿಡ್‌ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆ ನೀಡಿದೆ. ಕೊಡಗು, ಮೈಸೂರು, ಬೆಳಗಾವಿ, ಮಂಗಳೂರು ಮೂಲಕ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ತಿಳಿಸಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24