ಮಹಿಳೆಯರ ಗಲಾಟೆ ಮಿತಿಮೀರಿದೆ, ಶೀಘ್ರ ಉಚಿತ ಬಸ್ ಪ್ರಯಾಣ ಜಾರಿ ಮಾಡಿ : ಸಿಎಂಗೆ ಸಾರಿಗೆ ಯೂನಿಯನ್ ಪತ್ರ – Vishwanews24
ಮಹಿಳೆಯರ ಗಲಾಟೆ ಮಿತಿಮೀರಿದೆ, ಶೀಘ್ರ ಉಚಿತ ಬಸ್ ಪ್ರಯಾಣ ಜಾರಿ ಮಾಡಿ : ಸಿಎಂಗೆ ಸಾರಿಗೆ ಯೂನಿಯನ್ ಪತ್ರ
ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.
ಇದರ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಸ್ ನಲ್ಲಿ ಟಿಕೆಟ್ ಮಾಡಿಸದೇ ಮಹಿಳೆಯರು ನಿರ್ವಾಹಕರ ಜೊತೆ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಿಬ್ಬಂದಿಗೆ ತೊಂದರೆ ಕಿರಿಕಿರಿ ಆಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸಾರಿಗೆ ಯೂನಿಯನ್ ವತಿಯಿಂದ ಪತ್ರ ಬರೆಯಲಾಗಿದೆ.
ಕಾರ್ಕಳ: ಶಾಸಕ ಹರೀಶ್ ಪೂಂಜಾ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – Vishwanews24
ಬಸ್ ನಲ್ಲಿ ಮಹಿಳೆಯರು ಹಣ ನೀಡಲು ನಿರಾಕರಿಸುತ್ತಿದ್ದಾರೆ. ಹಣ ನೀಡುವಂತೆ ಕೇಳಿದ್ರೆ ಗಲಾಟೆ ಮಾಡುತ್ತಾರೆ. ಇದರಿಂದ ನಮ್ಮ ಸಿಬ್ಬಂದಿ ಟಿಕೆಟ್ ಪಡೆಯುವದೇ ಕಷ್ಟವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಶೀಘ್ರ ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿತ್ತು.
ಜೂನ್ 1 ರೊಳಗೆ ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ : ಪ್ರತಾಪ್ ಸಿಂಹ – Vishwanews24
