ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24
ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24
ಕಾಪು : ಕೊರೊನಾ ಮಹಾಮಾರಿಯಿಂದ ತೊಂದರೆಗೊಳಗಾದ ಯಕ್ಷಗಾನ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕಾಪುವಿನ ಕಲಾಪ್ರೇಮಿಗಳು ಹುಟ್ಟುಹಾಕಿರುವ ಸಂಘಟನೆ “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನಾ ಸಮಾರಂಭ ಹಾಗೂ ಯಕ್ಷಗಾನ ಪ್ರದರ್ಶನ ಮಾ. 13ರಂದು ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ತಿಳಿಸಿದ್ದಾರೆ.
ಅವರು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನೂತನ ಸಂಘಟನೆ ಅವಿರತ ಕೆಲಸ ಮಾಡಲಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕಲಾವಿದರಿಗೆ ಸನ್ಮಾನ, ಅಶಕ್ತ ಹಾಗೂ ಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವ ಯೋಜನೆಯಿದ್ದು ಪ್ರತೀ ವರ್ಷ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಈ ಬಾರಿ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರ “ಕಾರಣಿಕದ ಕೊರಗಜ್ಜ” ಯಕ್ಷಗಾನ ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅರುಣ್ ಶೆಟ್ಟಿ ಪಾದೂರು, ಸಂತೋಷ್ ಆರ್ ಶೆಟ್ಟಿ, ಪುರುಷೋತ್ತಮ ಸಾಲಿಯಾನ್, ಪ್ರಭಾತ್ ಕುಮಾರ್ ಶೆಟ್ಟಿ, ರಘುನಾಥ ಶೆಟ್ಟಿ, ಉಮೇಶ್ ಮಲ್ಲಾರ್ ಉಪಸ್ಥಿತರಿದ್ದರು.
