ಮಾಡಾಳ್ ಜಾಮೀನು : ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್ ಕಟೀಲ್ – Vishwanews24
ಮಾಡಾಳ್ ಜಾಮೀನು ವಿಚಾರ :ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್ ಕಟೀಲ್
ಚನ್ನರಾಯಪಟ್ಟಣ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ಸರಿಯಲ್ಲ. ಇದು ನಮಗೂ ಮುಜುಗರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪಕ್ಷ ರಕ್ಷಣೆ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು – Vishwanews24
ಮಾಡಾಳ್ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
