ಮಾಧ್ಯಮಗಳಲ್ಲಿ ಮಾತ್ರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುದ್ದಿ : ಮುರುಗೇಶ ನಿರಾಣಿ – Vishwanews24

Featured, ರಾಜ್ಯ ನ್ಯೂಸ್

ಮಾಧ್ಯಮಗಳಲ್ಲಿ ಮಾತ್ರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುದ್ದಿ : ಮುರುಗೇಶ ನಿರಾಣಿ – Vishwanews24

 

ಬೆಳಗಾವಿ: ಮಾಧ್ಯಮಗಳಲ್ಲಿ ಮಾತ್ರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುದ್ದಿ ಬರುತ್ತಿದೆ. ರಾಷ್ಟೀಯ ನಾಯಕರ ಮುಂದೆ ನಾಯಕತ್ವ ಬದಲಾವಣೆ ವಿಷಯ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ನಾಯಕರಾದ ಪ್ರಹ್ಲಾದ ಜೋಶಿ, ಸಿಟಿ ರವಿ ಅವರೂ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಎಂದು ಹೇಳಿದರು.

ಮುರಗೇಶ ನಿರಾಣಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಷ್ಟೀಯ ನಾಯಕರು ಅನುಭವಿಗಳಿದ್ದಾರೆ. ಈ ಬಗ್ಗೆ ಅವರು ನಿರ್ಧರಿಸುತ್ತಾರೆ. ನನಗೆ ಮುಖ್ಯಮಂತ್ರಿ ಹುದ್ದೆ ನೀಡಿದಾಗಲೇ ಅದರ ಬಗ್ಗೆ ಮಾತನಾಡುತ್ತೇನೆ. ನೂರಕ್ಕೆ ನೂರರಷ್ಟು ಯಡಿಯೂರಪ್ಪನವರೇ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿ ಮುಂದುವರಯಲಿದ್ದಾರೆ. ಮುಂದಿನ ಚುನಾವಣೆಯೂ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯಲಿದೆ ಎಂದರು.