ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

Featured, ರಾಜ್ಯ ನ್ಯೂಸ್

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ

ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್​​ನ ನಿರ್ದೇಶನ ಜಾರಿ ಮಾಡಿದಂತಾಗಿದೆ.

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ – vishwanews24

ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್​​ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್​​ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್​​ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.

ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್​​ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಕಾಮರ್ಸ್ ಒಲಿಂಪಿಯಾಡ್ 2025 – ಸ್ಪರ್ಧೆಯಲ್ಲಿ ಉಡುಪಿಯ 9ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದೇಶಕ್ಕೆ 12ನೇ ರ‍್ಯಾಂಕ್ – vishwanews24

Leave a Reply