ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ : ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಯಶ್‍ಪಾಲ್ ಸುವರ್ಣ -Vishwanews24

Featured, ಉಡುಪಿ

ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಖಾತೆಯ ಸಚಿವರಾಗಿ ಕರಾವಳಿ ಭಾಗದ ಕೋಟ ಶ್ರೀನಿವಾಸ ಪೂಜಾರಿಯರ ಆಯ್ಕೆ ಮಾಡಿದ ರಾಜ್ಯ ಸರಕಾರದ ನಡೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಮೀನುಗಾರಿಕೆಯ ಬಗ್ಗೆ ಮಾಹಿತಿಯಿರುವ ಕರಾವಳಿಯ ಭಾಗದವರನ್ನೇ ಈ ಖಾತೆಯ ಸಚಿರನ್ನಾಗಿಸಬೇಕೆಂಬ ಕರಾವಳಿ ಭಾಗದ ಮೀನುಗಾರರ ಬಹುದಿನದ ಬೇಡಿಕೆಯನ್ನು ಪರಿಗಣಿಸಿ ಈ ಬಾರಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನೇಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.ಯಡಿಯೂರಪ್ಪ ರವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಹಿಂದೆ ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ತೀರ ಹತ್ತಿರದಿಂದ ಬಲ್ಲವರಾಗಿದ್ದು, ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಬಗ್ಗೆ ಮೀನುಗಾರ ವಲಯ ಅಪಾರ ನಿರೀಕ್ಷೆ ಹೊಂದಿದೆ ಎಂದು   ತಿಳಿಸಿದ್ದಾರೆ.