ಮುಂದಿನ ಆರು ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ : ಜಮೀರ್ -Vishwanews24
ಬಾಗಲಕೋಟೆ : ಮುಂದಿನ ಆರು ತಿಂಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ.
ಇಂದು ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಯಡಿಯೂರಪ್ಪ ಹಿಟ್ಲರ್ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 40 ಜನ ಬಿಜೆಪಿ ಶಾಸಕರು ಅಸಮಧಾನಗೊಂಡಿದ್ದಾರೆ. ಖಂಡಿತವಾಗಿಯೂ ಆರು ತಿಂಗಳ ಮೇಲೆ ಬಿಜೆಪಿ ಸರ್ಕಾರ ಇರಲು ಸಾಧ್ಯವಿಲ್ಲ ಎಂದರು.
ಅಕ್ಟೋಬರ್ 24ರಂದು ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು 8 ಸ್ಥಾನ ಗೆಲ್ಲಲೇಬೇಕಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ 14 ರಿಂದ 15 ಸ್ಥಾನ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ಆರು ತಿಂಗಳು ಬಿಡಿ ಉಪಚುನಾವಣೆ ಫಲಿತಾಂಶ ಬಂದ ಎರಡೇ ದಿನಕ್ಕೆ ಸರಕಾರ ಪತನವಾಗುತ್ತದೆ ಎಂಬುದಾಗಿ ಜಮೀರ್ ತಿಳಿಸಿದರು.
