ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿ.ಕೆ. ಶಿ‍. ಅವರು ಮುಖ್ಯಮಂತ್ರಿ ಆಗ್ತಾರೆ : ಮೊಹಮ್ಮದ್ ನಲಪಾಡ್ -Vishwanews24

Featured, ರಾಜ್ಯ ನ್ಯೂಸ್

ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿ.ಕೆ. ಶಿ‍. ಅವರು ಮುಖ್ಯಮಂತ್ರಿ ಆಗ್ತಾರೆ : ಮೊಹಮ್ಮದ್ ನಲಪಾಡ್ -Vishwanews24

ಬೆಂಗಳೂರು : ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರ ಬಂದ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

ಮಂಗಳೂರಿನ ಕರಾವಳಿ ಭಾಗದಲ್ಲಿ ಮೀನುಗಾರರ ಜೊತೆಗೆ ಮಾತನಾಡುತ್ತಿದ್ದ ವೇಳೆ, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕುರಿತ ಚರ್ಚೆಗೆ ಕಾರಣರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಮುಖಂಡರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದು ಹಲವು ಚರ್ಚೆಗಳಿಗೆ ಗ್ರಾಸವಾಗಿತ್ತು. ಇದೀಗ ನಲಪಾಡ್ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.