ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24
ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24
ಪ್ರಧಾನಿ ಮೋದಿ,ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ನಾಯಕರಿಂದ ಶುಭಾಶಯ..
ಬೆಂಗಳೂರು: 79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ.
ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪ ಜಿ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು, ಅವರು ರೈತರ ಕಲ್ಯಾಣಕ್ಕಾಗಿ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಪ್ರಧಾನಿ ಮೋದಿ ಶುಭಾಶಯಕೋರಿದ್ದಾರೆ.
ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24
Greetings to Karnataka CM @BSYBJP Ji on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.
— Narendra Modi (@narendramodi) February 27, 2021
ಹೋರಾಟವನ್ನೇ ಬದುಕಾಗಿಸಿಕೊಂಡ ಹುಟ್ಟುಹೋರಾಟಗಾರ, ಜನಸೇವೆಯನ್ನೇ ಬದುಕಿನ ಗುರಿಯಾಗಿಸಿಕೊಂಡ ಧೀಮಂತ, ಸವಾಲುಗಳನ್ನು ಲೆಕ್ಕಿಸದೆ ಮುನ್ನುಗ್ಗುವ ಛಲದಂಕಮಲ್ಲ, ಸರಿಸಾಟಿಯಿಲ್ಲದ ಜನನಾಯಕ, ಸನ್ಮಾನ್ಯ ಮುಖ್ಯಮಂತ್ರಿ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ, ಜನರ ಪ್ರೀತಿ ಸದಾ ನಿಮ್ಮೊಂದಿಗಿರಲಿ ಎಂದು ಬಿಎಸ್ವೈ ಅವರ ಮಗ ವಿಜಯೇಂದ್ರ ಹುಟ್ಟುಹಬ್ಬದ ಶುಭಾಶಯವನ್ನು ಟ್ವೀಟ್ ಮಾಡಿವ ಮೂಲಕವಾಗಿ ತಿಳಿಸಿದ್ದಾರೆ.
ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24
ಛಲ, ಸಂಕಲ್ಪ ಶಕ್ತಿ ಮತ್ತು ಹೋರಾಟದ ಮೂಲಕವೇ ಗುರುತಿಸಿಕೊಂಡಿರುವ ಅಭಿವೃದ್ಧಿಯ ಹರಿಕಾರ, ರೈತಬಂಧು, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀಯುತ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವರು ನಿಮಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಬಿಎಸ್ವೈ ಕಿರಿ ಪುತ್ರ ಹಾಗೂ ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರ ಶುಭಕೋರಿದ್ದಾರೆ.
ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಬಿ. ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯಾತಿಗಣ್ಯರಿಂದ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ. ಜನ್ಮದಿನದ ಶುಭಾಶಯ ಕೋರಿದ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಗುಪ್ತಚರ ದಳದ ಎಡಿಜಿಪಿ ದಯಾನಂದ್ ಸಚಿವರಿಂದ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
