ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ : ಬಸವರಾಜ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ಚಿತ್ರದುರ್ಗ: ” ಮುಖ್ಯಮಂತ್ರಿ ಯಡಿಯೂರಪ್ಪಗೆ ಧಮ್ ಇಲ್ಲ. ಪ್ರಧಾನಿ ಮೋದಿ ತಾಳಕ್ಕೆ ಸಿಎಂ ಕುಣಿಯುತ್ತಿದ್ದಾರೆ” ಎಂಬ ಸಿದ್ದರಾಮಯ್ಯ ಅವರ ಮಾತಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ” ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ. ಹೀಗಾಗಿಯೇ ಇಂದು ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕುಳಿತಿದ್ದಾರೆ ” ಎಂದರು.

ಚಿತ್ರದುರ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರದಿಂದ ಅತೀ ಹೆಚ್ಚು ಅನುದಾನ ತಂದಿದ್ದಾರೆ. ಜಿಎಸ್ ಟಿಗೆ ಸಂಬಂಧಿಸಿ 4300 ಕೋಟಿ ರೂ ಅನುದಾನ ತರುವಲ್ಲಿಯೂ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಇದೇ ವೇಳೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಚ್‌. ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿಶ್ವನಾಥ್ ಅವರಿಗೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದೆ. ಶೀಘ್ರದಲ್ಲೇ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದರು.