ಮುಖ್ಯಮಂತ್ರಿಯಾಗಿ 14 ತಿಂಗಳು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ 14 ತಿಂಗಳು ನಾನು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ. ಆದರೂ, ಮೈತ್ರಿ ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿಕೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೊಳ್ಳುವುದು ಬಹುತೇಕ ಕಾಂಗ್ರೆಸ್ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಇಷ್ಟವಿರಲಿಲ್ಲ. ಇವೆಲ್ಲದರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಆಸಕ್ತಿ ತೋರಿ, ಜೆಡಿಎಸ್ ಗೆ ಸಂಪೂರ್ಣ ಬೆಂಬಲ ನೀಡಿದ್ದರು ಎಂದರು.

ನಿಗಮ ಮತ್ತು ಮಂಡಳಿಗಳಿಗೆ ನೇಮಕವಾಗಿದ್ದ ಶಾಸಕರು ಸೇರಿ ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ.ಆದರೂ, ಸರ್ಕಾರದ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ. ಸರ್ಕಾರ ಪತನವಾಗಲು ನಾನು ಕಾರಣ ಎಂದು ದೂರಲಾಗುತ್ತಿದೆ. ಅದರೆ ಇದಕ್ಕೆ ನಾನು ಕಾರಣನಲ್ಲ. ನನ್ನನ್ನು ದೂರುತ್ತಿರುವುದು ಏಕೆಂದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.