ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ , ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ -Vishwanews24

Featured, ದಕ್ಷಿಣ ಕನ್ನಡ

ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ , ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ -Vishwanews24

ಮಂಗಳೂರು : ಕೊರೋನ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ, ಸರಕಾರದಲ್ಲಿ ವಿಶ್ವಾಸವಿಟ್ಟು, ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆಗಳು ಪರಿಹಾರವಾಗಲಿವೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ ಮಾಡಿದ್ದಾರೆ.

ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರ ಐದನೇ ದಿನವು ಮುಂದುವರೆದಿದ್ದರೂ ಸಹ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಕಾರ್ಯಾಚರಣೆ ಯಾಗುತ್ತಿರುವ ಅನುಸೂಚಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಮಾಹಿತಿ ಒದಗಿಸಿದ್ದಾರೆ.

ಹೊಸ ಕೃಷಿ ಕಾನೂನು : ಸರಕಾರ ಆಹ್ವಾನಿಸಿದರೆ ಮಾತುಕತೆಗೆ ಸಿದ್ಧ, ಆದರೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ರಾಕೇಶ್ ಟಿಕಾಯತ್ -Vishwanews24

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗ ಹಾಗೂ ಪುತ್ತೂರು ವಿಭಾಗಗಳ ವತಿಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಅನುಸೂಚಿ ವಾಹನಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ .

ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕ ರರೆಲ್ಲರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಈ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿ ಕೊಂಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24