ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು : ಉಡುಪಿ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ರಾಘವಲು

Featured, ಉಡುಪಿ

ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತೀ ಯುಗದಲ್ಲೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿದರು. ಕಲಿಯುಗದ ರಾಕ್ಷಸರು ಸಂಸತ್ ಮೇಲೆ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಆದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.

ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.

vishwanews24