ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ, ಹನುಮಾನ್ ಚಾಲೀಸಾ ಪಠಿಸೋಕೆ ನಾವು ಮಂಗಳವಾರ ರಸ್ತೆ ತಡೆ ಮಾಡುತ್ತೇವೆ : ಒ.ಪಿ. ಸಿಂಗ್ -Vishwanews24
ನವದೆಹಲಿ: ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ ನಾವು ಹನುಮಾನ್ ಚಾಲೀಸಾ ಪಠಿಸೋಕೆ ಮಂಗಳವಾರ ರಸ್ತೆ ತಡೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಪಶ್ಚಿಮ ಬಂಗಾಳ ಹೌರಾ ಜಿಲ್ಲಾಧ್ಯಕ್ಷ ಒ.ಪಿ. ಸಿಂಗ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರು ಗ್ರಾಂಡ್ ಟ್ರಂಕ್ ರೋಡ್ ಸೇರಿ ಹಲವು ಪ್ರಮುಖ ರಸ್ತೆಗಳನ್ನು ಬಳಸಿಕೊಂಡು, ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಕಚೇರಿ ತಲುಪಲು ಜನರಿಗೆ ತೊಂದರೆಯಾಗುತ್ತಿದೆ. ಈ ಪದ್ಧತಿ ಎಲ್ಲಿಯವರೆಗೂ ಮುಂದುವರೆಯುತ್ತದೋ ಅಲ್ಲಿಯವರೆಗೆ ನಾವು ಕೂಡ ಪ್ರತಿ ಮಂಗಳವಾರ ಪ್ರಮುಖ ರಸ್ತೆಗಳಲ್ಲಿ ಕುಳಿತು ಹನುಮಾನ ಚಾಲೀನಾ ಪಠಿಸಿ, ಜನ, ವಾಹನಕ್ಕೆ ಸಂಚರಕ್ಕೆ ಅಡ್ಡಿಪಡಿಸಲಿದ್ದೇವೆ ಎಂದು ಹೇಳಿದ್ದಾರೆ.
ಹೌರಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿರುವ ಹನುಮಾನ ದೇಗುಲಗಳಲ್ಲಿ ಪ್ರತಿ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಅವುಗಳ ಎದುರಿನ ರಸ್ತೆಯಲ್ಲೇ ಕುಳಿತು ಹನುಮಾನ ಚಾಲೀಸಾ ಪಠಿಸುತ್ತಿದ್ದಾರೆ.
#WATCH WB: Bharatiya Janata Yuva Morcha recite Hanuman Chalisa near Bally Khal in Howrah. OP Singh, BJYM Pres, Howrah says, "GT Road is blocked to offer Friday namaz. Patients die,people can't reach office on time.Recitation continues till Friday Namaz like that is offered (25.6) pic.twitter.com/BscHgYJt2C
— ANI (@ANI) June 26, 2019
