ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ – Vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ

ಮೂಡುಬಿದಿರೆ,: ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದು, ಕ್ರಿಯಾಶೀಲ ಪತ್ರಕರ್ತರಾಗಿದ್ದು ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು.

ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ಭಾನುವಾರ ಸಂಜೆ ತನ್ನ ಸಹೋದರಿಯ ಮನೆಗೆ ಹೋಗಿದ್ದು ಸೋಮವಾರದಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply