ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ !! ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ರೋಷನ್ ಬೇಗ್ ರಾಜಿನಾಮೆ -Vishwanews24

Featured, ರಾಜ್ಯ ನ್ಯೂಸ್

ರಾಜಕೀಯ ಸಮನ್ವಯತೆ ಪಕ್ಷಗಳಲ್ಲಿ ಚೆನ್ನಾಗಿದ್ದಿದ್ದರೆ ಇಂದಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದ ಅವರು, ಈ ವೇಳೆ ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡಲು ಇಚ್ಛಿಸಲ್ಲ. ರಾಮಲಿಂಗಾ ರೆಡ್ಡಿ ಮತ್ತು ನಾವು ವಿದ್ಯಾರ್ಥಿ ಚಳುವಳಿಯ ಸಮಯದಿಂದ ರಾಜಕೀಯದಲ್ಲಿದ್ದವರು. ಲೋಕಸಭಾ ಚುನಾವಣೆಯಲ್ಲಿ ಯಾವ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಸಂಪರ್ಕಿಸಿ ಸಲಹೆ ಪಡೆಯಲಿಲ್ಲ. ಇದೀಗ ಎಲ್ಲರಿಗೂ ನಾವು ಬೇಕಾಗಿದ್ದೇವೆ. ನನಗೆ ಮಂತ್ರಿ ಆಗಲು ಇಷ್ಟವಿಲ್ಲ. ಯಾವ ಮಂತ್ರಿ ಪದವಿಯೂ ನನಗೆ ಬೇಡ ಎಂದರು.

ಲೋಕಸಭಾ ಚುನಾವಣೆಯ ನಂತರ ಬಹಿರಂಗವಾಗಿಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದ್ದಕ್ಕೆ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ಸಿನಿಂದ ಉಚ್ಚಾಟಿಸಲಾಗಿತ್ತು.