ಮೈಸೂರು: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಸಾವು – vishwanews24
ಮೈಸೂರು: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಸಾವು
ಮೈಸೂರು: ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19), ಸ್ವಾತಿ (17) ಎಂದು ಗುರುತಿಸಲಾಗಿದೆ. ಮೃತ ಕುಮಾರಸ್ವಾಮಿ ಅವರು ಬಟ್ಟೆ ಐರನ್ ಮಾಡುವ ಕೆಲಸ ಮಾಡಿಕೊಂಡು ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದರು.
ಸದ್ಯ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆ ಶಂಕೆ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ ಪೊಲೀಸರು – vishwanews24
ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಬೆಳಗ್ಗೆ ಆದರೂ ಮನೆಯಿಂದ ಯಾರು ಹೊರಬಾರದ ಕಾರಣ ಅಕ್ಕಪಕ್ಕದ ಮನೆಯವರು ಮನೆಯ ಬಳಿ ಪರಿಶೀಲನೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಪೊಲೀಸರು ಬಂದು ಮನೆಯಲ್ಲಿ ಪರಿಶೀಲನೆ ನಡೆಸಿದ ವೇಳೆ ಮೃತದೇಹಗಳು ಮಲಗಿದ್ದಲ್ಲೇ ಇರೋದು ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ಮನೆಯಲ್ಲಿದ್ದ ಸಿಲಿಂಡರ್ ಅನ್ನು ಹೊರ ತೆಗೆದಿಟ್ಟು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮಾಡಲು ಪೊಲೀಸರು ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ಮಾಡ್ತಿದ್ದಾರೆ. ಒಟ್ಟಿಗೆ ನಾಲ್ವರು ಕುಟುಂಬಸ್ಥರನ್ನು ಕಳೆದುಕೊಂಡ ಸಂಬಂಧಿಗಳ ಅಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿದೆ.
ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್ ವಾದ್ರಾ -vishwanews24
