ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ : ಸಿಎಂ ಬೊಮ್ಮಾಯಿ – Vishwanews24
ಮೋದಿಯವರು ಪ್ರಧಾನಿಯಾದ ಬಳಿಕ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ..
ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಲಭಿಸಿದ ಅನುದಾನ ಅಪಾರ..
ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭ..
ಬೆಂಗಳೂರು: ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.
ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿದ ಅವರು ಕುವೆಂಪು ವಿರಚಿತ ನಾಡಗೀತೆ ಉಲ್ಲೇಖಿಸಿ ಮಾತನಾಡಿ ” ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೇ ” ಎಂಬ ವಾಕ್ಯದಲ್ಲಿ ನಾವು ನಂಬಿಕೆ ಹೊಂದಿದ್ದೇವೆ.
ಪ್ರಧಾನಿಯವರ ನವಭಾರತದ ಕಲ್ಪನೆಗೆ ನವ ಕರ್ನಾಟಕ ನಿರ್ಮಾಣದ ಮೂಲಕ ನಾವು ಕೈ ಜೋಡಿಸುತ್ತಿದ್ದೇವೆ. ಮೋದಿಯವರ ಆಶೀರ್ವಾದ ಇದ್ದರೆ ನವ ಕರ್ನಾಟಕದ ಕನಸು ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು.
ಒಬ್ಬ ಮುತ್ಸದ್ಧಿಯಾದವ ಸದಾ ಅಭಿವೃದ್ಧಿ ಕಾರ್ಯಕ್ರಮಗಳ ಕಡೆಗೆ ಗಮನ ನೀಡುತ್ತಾರೆ. ಮೋದಿಯವರು ಪ್ರಧಾನಿಯಾದ ಬಳಿಕ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಲಭಿಸಿದ ಅನುದಾನ ಅಪಾರ ಎಂದು ಹೇಳಿದರು.
ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು.
ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ – Vishwanews24
