ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ :ರಾಜ್ಯಪಾಲ ಕಲ್ಯಾಣ್ ಸಿಂಗ್ – Vishwanews24 

Featured, ರಾಷ್ಟ್ರ ನ್ಯೂಸ್
ಹೊಸದಿಲ್ಲಿ: ಸಂವಿಧಾನಾತ್ಮಕ ಹುದ್ದೆಯಲ್ಲಿರುವುದನ್ನು ಮರೆತು ಬಿಜೆಪಿ ಪರ ಮತಯಾಚಿಸುವುದರ ಮೂಲಕ ರಾಜಸ್ಥಾನ ರಾಜ್ಯಪಾಲರಾದ ಕಲ್ಯಾಣ್ ಸಿಂಗ್ ಹೇಳಿದ್ದಾರೆ.
ಅಲಿಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ನಾವೆಲ್ಲ ಬಿಜೆಪಿ ಕಾರ್ಯಕರ್ತರು. ಪಕ್ಷದ ಗೆಲುವಿಗಾಗಿ ಮತ್ತು ಮತ್ತೆ ನರೇಂದ್ರ ಮೋದಿಯನ್ನು ಪ್ರಧಾನಿಯನ್ನಾಗಿಸಲು ಕೆಲಸ ಮಾಡುತ್ತಿದ್ದೇವೆ ಎಂದವರು ಹೇಳಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ ಹಿತದೃಷ್ಟಿಯಿಂದ ಮಹತ್ವದ್ದು ಎಂದಿದ್ದಾರೆ ಕಲ್ಯಾಣ್ ಸಿಂಗ್.

ಸಂವಿಧಾನಾತ್ಮಕ ಸ್ಥಾನ ಹೊಂದಿರುವ ಸಿಂಗ್ ಯಾವುದೇ ರಾಜಕೀಯ ಸಂಬಂಧವನ್ನು ಹೊಂದಿರಬಾರದು. ಆದರೆ ರಾಜ್ಯಪಾಲರ ಹುದ್ದೆಯಲ್ಲಿರುವ ಅವರು ಒಂದು ಪಕ್ಷದ ಪರವಾಗಿ ಮಾತನಾಡಿದ್ದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.

ಸಿಂಗ್ 1991ರಿಂದ-1992ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು.  2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಳಿಕ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.

ಸಂವಿಧಾನದ ಹುದ್ದೆಯಲ್ಲಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಮೀರಿ ಒಂದು ಪಕ್ಷದ ಕಾರ್ಯಕರ್ತನಂತೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.