ಮೋದಿಯವರು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ- ಪ್ರತಾಪ್ ಸಿಂಹ

Featured, ಜಿಲ್ಲೆ

ಮಡಿಕೇರಿ: ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಮೋದಿಯವರ ಸರ್ಕಾರ ಕಳೆದ 4 ವರ್ಷಗಳಲ್ಲಿ ಕೊಟ್ಟಿರುವ ಯೋಜನೆಗಳನ್ನು ನೋಡಿದ್ರೆ ರಾಜ್ಯ ಬಗ್ಗೆ ಅವರು ಎಷ್ಟು ಪ್ರೀತಿ ಕಾಳಜಿ ಹೊಂದಿದ್ದಾರೆ ಎಂಬುದು ಗೊತ್ತಾಗುತ್ತೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದರು.

ಪ್ರಧಾನಿ ಮೋದಿ ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎನ್ನುವ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ , ಮೋದಿಯವರು ಮಾಡಿದ ಕೆಲಸಗಳನ್ನು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.