ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂದು ಕಾಂಗ್ರೆಸ್ ನವರು ಸರ್ಕಾರ ರಚನೆಗೆ ಮುಂದಾದರು : ದೇವೇಗೌಡ -Vishwanews24

Featured

ಬೆಂಗಳೂರು:.ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ. ರಾಜಕಾರಣದಲ್ಲಿ ಏಳು ಬೀಳು ಇದ್ದೇ ಇರುತ್ತದೆ. ನನ್ನ ಜೊತೆಗೆ ಇದ್ದು ನನ್ನ ಜೊತೆಗೆ ಬೆಳೆದವರು ಬಿಟ್ಟು ಹೋದರು. ಆದರೂ ಸಹ ನಾನು ದೃತಿಗೆಡದೆ ಮುಂದೆ ಬಂದಿದ್ದೇನೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಪರೋಕ್ಷವಾಗಿ ಮಾಜಿ ಸಿಎಂ ಸಿದ್ಧರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ.

ಮೈತ್ರಿ ಸರ್ಕಾರ ಮಾಡಲೇಬೇಕು ಎಂದು ನನಗೆ ಇರಲಿಲ್ಲ. ದೆಹಲಿ ನಾಯಕರು ನಿಮ್ಮ ಮಗನನ್ನು ಸಿಎಂ ಮಾಡಬೇಕೆಂದು ಬಂದಿದ್ದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆ ನಂತರ ಶಕ್ತಿಯನ್ನು ಕಳೆದುಕೊಂಡಿದೆ.

ನಮ್ಮ ಪಕ್ಷದ ಪಾಲಿನ ಮಂತ್ರಿ ಸ್ಥಾನವನ್ನು ಅವರು ತೆಗೆದುಕೊಂಡಿದ್ದಾರೆ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ಏನಾದರೂ ಮಾತನಾಡಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂದು ಕಾಂಗ್ರೆಸ್ ನವರು ಓಡಿಬಂದರು. ಎಲ್ಲವನ್ನು ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾದರು. ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನನ್ನು ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಈ ಮೂಲಕ ದೋಸ್ತಿ ಕಾಂಗ್ರೆಸ್ ಗೆ ದೊಡ್ಡ ಗೌಡರು ಬಿಗ್ ಶಾಕ್ ನೀಡಿದ್ದಾರೆ.