ಯವ‌ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಮಿಥುನ್ ರೈ ಸಹಿತ 18 ಯುವ ಕಾಂಗ್ರೆಸ್ ಪದಾಧಿಕಾರಿಗಳ ಅಮಾನತು

ಉಡುಪಿ

ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗು ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ ನ ಎಂಟು ಮಂದಿ ಕಾರ್ಯದರ್ಶಿಗಳನ್ನು ಹಾಗು ರಾಜ್ಯ ಯುವ ಕಾಂಗ್ರೆಸ್ ನ ಒಬ್ಬ ಉಪಾಧ್ಯಕ್ಷರನ್ನು ಅಮಾನತು ಮಾಡಲಾಗಿದೆ ಎಂದು ರವೀಂದ್ರದಾಸ್ ತಿಳಿಸಿದ್ದಾರೆ.

ಮಿಥುನ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಲ್ಲಿಂದ ಮಾಜಿ ಸಚಿವ ಅಭಯಚಂದ್ರ ಅವರಿಗೇ ಪಕ್ಷ ಮತ್ತೆ ಅವಕಾಶ ನೀಡಿತ್ತು. ಆದರೆ ಮೂಡಬಿದ್ರೆಯಿಂದ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಮಿಥುನ್ ರೈ ಇದರಿಂದ ಬೇಸರಿಸಿಕೊಂಡಿದ್ದರು. ಇದೀಗ ಪಕ್ಷದ ಸಂಘಟನೆ ಮಾಡಬೇಕಾದ ಯುವ ಘಟಕವೇ ನಿಷ್ಕ್ರಿಯವಾಗಿದೆ ಎಂದು ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ..

ಪಕ್ಷ ಸಂಘಟನೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಹಲವು ಬಾರಿ ನೋಟಿಸ್ನೀಡಿದರೂ ಇವರು ಉತ್ತರಿಸಿಲ್ಲ. ಹೀಗಾಗಿ ಕ್ರಮ ತೆಗೆದುಕೊಳ್ಳಲಾಗಿದೆಎಂದು ಅಮಾನತು ಆದೇಶದಲ್ಲಿ ಯುವ ಕಾಂಗ್ರೆಸ್ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರದಾಸ್ಸ್ಪಷ್ಟಪಡಿಸಿದ್ದಾರೆ.