ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ : ಡಿಸಿಎಂ ಡಿಕೆಶಿ – Vishwanews24
ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ : ಡಿಸಿಎಂ ಡಿಕೆಶಿ
ಬೆಂಗಳೂರು : ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಗ್ಯಾರೆಂಟಿ ಯೋಜನೆಗೆ ಪಟ್ಟು ಹಿಡಿದು ವಿಪಕ್ಷಗಳು ಟೀಕೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದಡಿಸಿಎಂ ಡಿಕೆಶಿ ಎಲ್ಲರಿಗೂ ಮಾತನಾಡುವ ವಾಕ್ ಸ್ವಾತಂರ್ತ್ಯ ಇದೆ ಮಾತನಾಡಲಿ ಬಿಡಿ.
ತಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದರು. ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದರು.
ಅಪಪ್ರಚಾರ, ಹಣಬಲದ ಮುಂದೆ ನಮ್ಮ ಪ್ರಾಮಾಣಿಕ ಜನಸೇವೆ ಮಂಕಾಗಿ ಹೋಯಿತು : ವಿನಯ್ ಕುಮಾರ್ ಸೊರಕೆ – VIshwanews24
ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ, ಈಗಾಗಲೇ ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡುತ್ತೇವೆ. ಗ್ಯಾರಂಟಿ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ. ಹೀಗಾಗಿ 5 ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು ಎಂದರು.
ನಾನು ಬಿಜೆಪಿ ಸ್ನೇಹಿತರಿಗೆ ಹೇಳುವುದು ಒಂದೇ ಅವರು ಮಾತು ಕೊಟ್ಟಿರುವಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕಲಿ. ಸಂಸತ್ ಚುನಾವಣೆಗೂ ಮುನ್ನ ಅದರ ಬಗ್ಗೆ ಮಾತನಾಡಲಿ. ನಮ್ಮ ಯೋಜನೆ ನಮಗೆ ಬಿಡಿ. ಬಿಜೆಪಿ 2018ರ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರಿಗೆ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರು. ಅದರ ಬಗ್ಗೆ ಮಾತನಾಡಲಿ. ಆಮೇಲೆ ಆಕ್ರೋಶ, ಧರಣಿ, ಹೋರಾಟ ಮಾಡಲಿ ಎಂದು ತಿಳಿಸಿದರು.
ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು – Vishwanews24
