ಯಾವುದೇ ಕಾರಣಕ್ಕೂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ : ಎಸ್ ಟಿ ಸೋಮಶೇಖರ್ -Vishwanews24
ಮುಂಬೈ, :ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ, ನಾವು ರಾಜಕಾರಣದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ರಾಜಕಾರಣ ಬೇರೆ. ಸ್ನೇಹ ಬೇರೆ, ಮುಂಬಯಿಯಲ್ಲಿ ಶಿವಕುಮಾರ್ ಅವರಿಗೆ ಅವಮಾನ ಆಗುವ ಮೊದಲೇ ಅವರು ಇಲ್ಲಿಂದ ಹೋಗಬೇಕು, ಎಂದು ಸೋಮಶೇಖರ್ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಈ ನಾಟಕವನ್ನು ಇಲ್ಲಿಗೆ ನಿಲ್ಲಿಸಬೇಕು, ಇದೆಲ್ಲಾವನ್ನು ಕಳೆದ ಒಂದು ವರ್ಷದಿಂದ ನೋಡಿ, ನೋಡಿ ಸಾಕಾಗಿದೆ, ನಾವು ಇವತ್ತು ಯಾರೋಂದಿಗೂ ಮಾತನಾಡುವ ಮನಸ್ಥಿತಿಯಲ್ಲಿಲ್ಲ, ನಾವು ತುಂಬಾ ಮನನೊಂದಿದ್ದೇವೆ, ಇದೆಲ್ಲಾವನ್ನು ಇಲ್ಲಿಗೆ ಬಂದ್ ಮಾಡಿ, ಇನ್ನೂ ನಾಲ್ಕು ಜನ ಶಾಸಕರು ಇಂದು ನಮ್ಮನ್ನು ಬಂದು ಸೇರಲಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.

