ರಸ್ತೆ ಗುಂಡಿಯಿಂದ ಗಾಯ, ಸಾವು ಸಂಭವಿಸಿದರೆ `FIR’ ದಾಖಲಿಸಿ ತನಿಖೆ ಮಾಡಿ : ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ – Vishwanews24
ರಸ್ತೆ ಗುಂಡಿಯಿಂದ ಗಾಯ, ಸಾವು ಸಂಭವಿಸಿದರೆ `FIR’ ದಾಖಲಿಸಿ ತನಿಖೆ ಮಾಡಿ : ಹೈಕೋರ್ಟ್ ಸೂಚನೆ
ಬೆಂಗಳೂರು : ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಮತ್ತು ಸಾವನ್ನಪ್ಪಿದ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಅವಾಂತರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೆ ಮತ್ತು ಸಾವನ್ನಪ್ಪಿದರೆ ತಾಂತ್ರಿಕ ಕಾರಣಗಳನ್ನು ನೀಡದೇ ಎಫ್ ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಗಲಾಟೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ನಟ ದುನಿಯಾ ವಿಜಯ್ ಗೆ ಪೊಲೀಸರಿಂದ ನೋಟಿಸ್ – Vishwanews24
ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ನ್ಯಾ. ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
