ರಾಜ್ಯ ಬಜೆಟ್ 2020 : ಅನ್ನಭಾಗ್ಯ ಯೋಜನೆಯಲ್ಲಿ ಇದ್ದ ಅಕ್ಕಿ ವಿತರಣೆ ಮುಂದುವರಿಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೆಮ್ಮದಿಯ ಸುದ್ದಿ ನೀಡಿದ್ದು, ಅಕ್ಕಿ ಕಡಿತ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.

ಇಂದು ಬಜೆಟ್ ಮಂಡಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಹಿಂದೆ ಅನ್ನಭಾಗ್ಯ ಯೋಜನೆಯಲ್ಲಿ ಇದ್ದ ಅಕ್ಕಿ ವಿತರಣೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ಪೈಕಿ 2 ಕೆಜಿ ಕಡಿತ ಮಾಡಿ, ತೊಗರಿ ಬೇಳೆ ವಿತರಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪ್ರಸ್ತಾವನೆ ಸಲ್ಲಿಸಿದ್ದರು.