ರಾಜ್ಯ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ : ಚಕ್ರವರ್ತಿ ಸೂಲಿಬೆಲೆ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ ; ಅವರಿಂದ ಇನ್ನೂ ಏನನ್ನು ನಿರೀಕ್ಷಿಸಲು ಸಾಧ್ಯ ..? : ಚಕ್ರವರ್ತಿ ಸೂಲಿಬೆಲೆ

ರಾಯಚೂರು: ರಾಜ್ಯ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ. ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ ಎಂದು ಹೇಳುವಾಗ ಇನ್ನೂ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಚಿಂತಕ, ಯುವ ಬ್ರಿಗೆಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಟೀಕಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವೆಲ್ಲ ಪೂಜಿಸುವ ಗೋವಿನ ಕೆಚ್ಚಲು ಕತ್ತರಿಸಿದವನಿಗೆ ಹುಚ್ಚ ಎನ್ನುವ ಪಟ್ಟ ಕಟ್ಟಲಾಗುತ್ತಿದೆ. ಆ ಹುಚ್ಚನಿಗೆ ಗೋವಿನ ಕೆಚ್ಚಲನ್ನೆ ಯಾಕೆ ಕಡಿಯಬೇಕು ಎನಿಸಿತು. ನಾಯಿಯದ್ದೊ ಮತ್ಯಾವುದೋ ಪ್ರಾಣಿಯದ್ದು ಯಾಕೆ ಕಡಿಯಬೇಕು ಎನಿಸಿಲಿಲ್ಲ. ಆತನಿಗೆ ಈ ಆಲೋಚನೆ ಬಂದಿದ್ದು ಯಾವ ಪ್ರಾರ್ಥನಾ ಮಂದಿರದಿಂದ ಎನ್ನುವುದನ್ನು ಸರ್ಕಾರ ತಿಳಿಸಬೇಕು ಎಂದು ತಾಕೀತು ಮಾಡಿದರು.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ :ಆರೋಪಿ ಸಂಜಯ್ ರಾಯ್ ದೋಷಿ – vishwanews24

ಮುಸ್ಲಿಮರು ತಪ್ಪು ಮಾಡಿದರೆ ಅವರು ಹುಚ್ಚರು, ದಡ್ಡರಾಗಿರುತ್ತಾರೆ. ಅದೆ ಬೇರೆ ಧರ್ಮಿಯರು ಮಾಡಿದಾಗ ವ್ಯವಸ್ಥಿತವಾಗಿ ಮಾಡಿರುತ್ತಾರೆ ಎಂದು ಬಿಂಬಿಸಲಾಗುತ್ತಿದೆ. ಹಿಂದು ಧರ್ಮದ ಆರಾಧನೆಗಳಿಗೆ ಅಪಮಾನ ಮಾಡಿದವರಿಗೆ ಹುಚ್ಚರೆಂಬ ಸಮಜಾಯಿಷಿ ಕೊಡುತ್ತೀರಿ ಎಂದರೆ ಸರ್ಕಾರ ಯಾವ ಮನಸ್ಥಿತಿಯಲ್ಲಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ಮುಸ್ಲಿಮರು ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳಬೇಕು ಎನ್ನುವ ಪ್ರಮುಖ ಅಜೆಂಡಾದಲ್ಲಿದ್ದಾರೆ. ಅವರಲ್ಲಿ ತಮ್ಮಿಂದ ಸಮಾಜಕ್ಕೆ ತೊಂದರೆಯಾಗುತ್ತದೆ ಎನ್ನುವ ಕಾಳಜಿ ಕಾಣುವುದಿಲ್ಲ. ಕೊರೊನಾ ವೇಳೆ ಎಲ್ಲರೂ ಮನೆಯಲ್ಲಿದ್ದರೆ ಅವರು ಮಾತ್ರ ನಾವು ಸಾಮೂಹಿಕ ಪ್ರಾರ್ಥನೆ ಮಾಡಿಯೇ ಸಿದ್ಧ ಎನ್ನುತ್ತಿದ್ದರು. ಮತಾಂತರ ಮಾಡುವುದು, ಅನ್ಯಧರ್ಮಿಯರ ಮಹಿಳೆಯರನ್ನು ಮದುವೆಯಾಗಿ ಜನಸಂಖ್ಯೆ ವೃದ್ಧಿಸಿಕೊಳ್ಳುವ ಕೆಲಸದಲ್ಲಿದ್ದಾರೆ. ದೇಶದಲ್ಲಿ 8-10 ಕೋಟಿ ಬಾಂಗ್ಲಾ ಮುಸ್ಲಿಮರಿದ್ದಾರೆ ಎಂದು ಆ ದೇಶದವರೇ ಹೇಳುತ್ತಿದ್ದಾರೆ ಎಂದರು.

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ: ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ಎಫ್.ಐ.ಆರ್. ದಾಖಲು – vishwanews24

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ವ್ಯವಸ್ಥೆ ವಿರುದ್ಧವೇ ಹೋರಾಡುತ್ತಾರೆ. ವಿರೋಧಿ ದೇಶದ ನಾಯಕರು ನೀಡಬೇಕಾದ ಹೇಳಿಕೆಯನ್ನು ರಾಹುಲ್ ಗಾಂಧಿ ನೀಡುತ್ತಾರೆ. ಅವರ ಅಂತರಂಗದ ಹೇಳಿಕೆ ಹೊರಬಿದ್ದಂತಾಗಿದೆ. ಚೀನಾದ ಫಂಡ್ ಪಡೆದು ಫೌಂಡೇಶನ್ ನಡೆಸುವವರ ಬಗ್ಗೆ ನಾವು ಹೆಚ್ಚಿಗೆ ಏನು ಹೇಳಲಾಗದು ಎಂದರು.

ಡಾ.ಅಂಬೇಡ್ಕರ್ ವಿಚಾರಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬೆಳಕು ಹೊಳಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿಂದು ಧರ್ಮದ ಬುಡ ಅಲ್ಲಾಡಿಸಿದವರು ಡಾ.ಅಂಬೇಡ್ಕರ್ ಅವರು. ಅದನ್ನು ಸ್ವೀಕರಿಸಿ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಲಾಗುತ್ತದೆ. ಅವರು ಕೇವಲ ಹಿಂದು ಧರ್ಮವನ್ನು ಮಾತ್ರವಲ್ಲದೇ ಕಾಂಗ್ರೆಸ್ ಬಗ್ಗೆಯೂ ಕಟು ಟೀಕೆ ಮಾಡಿದರು. ಸ್ವಾಭಿಮಾನ ಕಳೆದುಕೊಳ್ಳಕಾದರೆ ಕಾಂಗ್ರೆಸ್ ಸೇರಿರಿ ಎಂದಿದ್ದರು. ಕಮ್ಯುನಿಸ್ಟರ್ ಬಗ್ಗೆಯೂ ಬಹಳ ಕಟುವಾಗಿ ಟೀಕಿಸಿದ್ದರು. ಡಾ.ಅಂಬೇಡ್ಕರ್ ಮಹಾಮಾನವತಾವಾದಿ. ಅವರ ವಿಚಾರಗಳನ್ನು ಜನರಿಗೆ ತಲುಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಡಬ: ಬೈಕ್ ಅಪಘಾತ ; 10ನೇ ತರಗತಿ ವಿದ್ಯಾರ್ಥಿ ಸಾವು – vishwanews24

Leave a Reply