ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಕುಟುಂಬ’ದವರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘ಮನೆ ನಿರ್ಮಾಣ’ದ ನೆರವು 5 ಲಕ್ಷಕ್ಕೆ ಹೆಚ್ಚಳ : ಸಚಿವ ಕೋಟಾ -Vishwanews24

Featured, ರಾಜ್ಯ ನ್ಯೂಸ್

ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಕುಟುಂಬ’ದವರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘ಮನೆ ನಿರ್ಮಾಣ’ದ ನೆರವು 5 ಲಕ್ಷಕ್ಕೆ ಹೆಚ್ಚಳ : ಸಚಿವ ಕೋಟಾ -Vishwanews24

ಬೆಂಗಳೂರು : ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ನೀಡಲಾಗುತ್ತಿದ್ದಂತ ನೆರವನ್ನು ರಾಜ್ಯ ಸರ್ಕಾರವು 1.70 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳೋ ಮೂಲಕ, ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಮಾಹಿತಿ ನೀಡಿದಂತ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಈಗ ಪರಿಶಿಷ್ಟ ಜಾತಿಯ ಬಡ ಕುಟುಂಬದವರಿಗೆ ಮನೆ ಕಟ್ಟೋದಕ್ಕೆ ನೀಡಲಾಗುತ್ತಿರುವಂತ ನೆರವು 1.70 ಲಕ್ಷ ಯಾವುದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ನೆರವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ನೆರವು 5 ಲಕ್ಷಕ್ಕೆ ಹೆಚ್ಚಿಸುವಂತ ಪ್ರಸ್ತಾವನೆಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಆ ಬಳಿಕ, ಮನೆ ಹೆಚ್ಚಳದ ನೆರವಿನ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂದರು.

ಕೊರೋನಾ ಲಾಕ್ ಡೌನ್ ನಂತ್ರದ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು, ರಾಜ್ಯ ಸರ್ಕಾರವು ಒಂದು ವರ್ಷಗಳ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಅನಿವಾರ್ಯವಲ್ಲದಂತ ಯೋಜನೆಗಳನ್ನು ತಡೆ ಹಿಡಿಯಲಾಗುವುದು ಎಂದು ತಿಳಿಸಿದರು.