ರಾಜ್ಯ ಸರ್ಕಾರಿ ನೌಕರರಿಗೆ  ಶೇ.17ರಷ್ಟು ವೇತನ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ  ಶೇ.17ರಷ್ಟು ವೇತನ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಈ ವೇಳೆಯಲ್ಲೇ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಶೇ.17ರಷ್ಟು ವೇತನ ಹೆಚ್ಚಳ ಮಾಡೋ ನಿರ್ಧಾರ ಮಾಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಕೂಡ ಮತ್ತೊಂದು ಸುತ್ತಿನ ಸಭೆಯನ್ನು ಸರ್ಕಾರಿ ನೌಕರರ ಸಂಘ ಹಾಗೂ ಅಧಿಕಾರಿಗಳ ಜೊತೆಗೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಮಧ್ಯಂತರ ಆದೇಶ ಹೊರಡಿಸಲು ಸಿದ್ಧತೆ ನಡೆಯುತ್ತಿದೆ ಎಂದರು.

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ – Vishwanews24

ಇದೇ ವೇಳೆ ಮಾತನಾಡಿರುವಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Leave a Reply