ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯ ಅಬ್ಬರ; ಹವಾಮಾನ ಇಲಾಖೆಯಿಂದ ಜೂನ್‌ 24 ರವೆರೆಗೆ ಯಲ್ಲೋ ಅಲರ್ಟ್ ಘೋಷಣೆ – Vishwnaews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯ ಅಬ್ಬರ; ಹವಾಮಾನ ಇಲಾಖೆಯಿಂದ ಜೂನ್‌ 24 ರವೆರೆಗೆ  ಯಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗಿದೆ. ಇನ್ನು ಮೂರ್ನಾಲ್ಕು ದಿನ ಕರ್ನಾಟಕದಲ್ಲಿ ಮಳೆ ಸುರಿಯಲಿದೆ.

ಈಗಾಗಲೇ ಬೆಂಗಳೂರಿನಲ್ಲಿ ದಿನ ನಿತ್ಯ ಮಳೆಯಿಂದಾಗಿ ಕೆಲವು ಏರಿಯಾಗಳೆಲ್ಲ ಮುಳುಗಡೆಯಾಗಿದೆ. ಇದ್ದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ೪ ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಈ ತಿಂಗಳು 24ರವರೆಗೆ ನಿರಂತರ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರಕನ್ನಡ , ಉಡುಪಿ , ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿದಂತೆ ಕೆಲ ಕಡೆ ಮಳೆಯಾಗಲಿದೆ. ಇಂದಿನಿಂದ ಜೂನ್‌ ೨೪ ರವೆರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇದೇ ತಿಂಗಳು ೨೩ ರಿಂದ ಉತ್ತರಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ.

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ ! – Vishwnaews24

Leave a Reply