ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಬದಲಾವಣೆ ಮಾಡ್ತೀವಿ : ಶಾಸಕ ರಿಜ್ವಾನ್ ಅರ್ಷದ್ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಬದಲಾವಣೆ ಮಾಡ್ತೀವಿ : ಶಾಸಕ ರಿಜ್ವಾನ್ ಅರ್ಷದ್

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ರೈತರಿಗೆ ಅನುಕೂಲ ಮಾಡಲಾಗುವುದು ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆಯನ್ನು ಸಂಪೂರ್ಣವಾಗಿ ನಿಷೇಧಿಸಲ್ಲ.

ಬದಲಾವಣೆ ಮಾಡುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ಅನಾನುಕೂಲವಾಗಿದೆ. ಬಿಜೆಪಿ ಬಹಳಷ್ಟು ರೈತರಿಗೆ ಅನಾನುಕೂಲ ಮಾಡಿದೆ. ಹೀಗಾಗಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂದರು.

ಗೋಹತ್ಯೆ ನಿಷೇಧದಿಂದ ಅವರ ಸಂಘಟನೆ ಈ ಕಾಯ್ದೆ ಮೂಲಕ ಹಣ ವಸೂಲಿ ಮಾಡೋ ದಂಧೆ ಮಾಡಿಕೊಂಡಿದ್ದರು. ಇದೀಗ ರಾಜ್ಯದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲ ನಿಮಯಗಳನ್ನು ಸಡಿಲ ಮಾಡುತ್ತೇವೆ ಎಂದರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಅಭಿಷೇಕ್ ಅಂಬರೀಶ್ – Vishwanews24

Leave a Reply