ರಾಜ್ಯದಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಮನೆ ನಿರ್ಮಾಣ : ವಿ.ಸೋಮಣ್ಣ -Vishwanews24

Featured, ರಾಜ್ಯ ನ್ಯೂಸ್

ಮೈಸೂರು : ರಾಜ್ಯದ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕಾಗಿ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಏಕಕಾಲದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮತ್ತೆ ಮನೆಗಳನ್ನು ಕಟ್ಟಿಕೊಡಲಾಗುತ್ತದೆ. ಈಗಾಗಲೇ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳನ್ನೇ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಡಿಸಿಗಳೇ ಅದರ ನೇತೃತ್ವ ವಹಿಸಿಕೊಂಡು ತ್ವರಿತವಾಗಿ ಕೆಲಸ ಮಾಡಲಿದ್ದಾರೆ. ಬೆಳಗಾವಿ, ಬಾಗಲಕೋಟೆ, ಮಡಿಕೇರಿ, ದೇವದುರ್ಗ ಸೇರಿದಂತೆ 102 ಕ್ಷೇತ್ರದಲ್ಲಿ ಹೆಚ್ಚಿನ ಮನೆ ಹಾನಿ ಉಂಟಾಗಿದೆ. ದುರಸ್ತಿಗೊಂಡ ಮನೆಗಳನ್ನು ರಿಪೇರಿ ಮಾಡಲಾಗುತ್ತದೆ. ಇದಕ್ಕಾಗಿ ರಾಜೀವ್ ಗಾಂಧಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.