ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿ ಅಂಗೀಕಾರ ಪಡೆಯಲಾಗಿದೆ.
ಆದರೆ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಸಚಿವ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಬಗ್ಗೆ ತೀರ್ಮಾನ ಕೈಗೊಂಡು ಅನುಮೋದನೆಗಾಗಿ ರಾಜ್ಯಪಾಲರೊಗೆ ಕಳಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ಪಡೆದು ಕಾಯ್ದೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ
ಮಲ್ಪೆ ಬೀಚಲ್ಲಿ ರ್ಯಾಪರ್ ಚಂದನ್ ಶೆಟ್ಟಿ – ನಿವೇದಿತಾ ದಂಪತಿ ನ್ಯೂ ಇಯರ್ ಸೆಲೆಬ್ರೇಷನ್.. Vishwanews24

