ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ – Vishwanews24
ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ – Vishwanews24
ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.
ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ. ಜತೆಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು ಕೂಡಾ ಸೂಚನೆ ನೀಡಿದ್ದಾರೆ.
ಕಾಪು ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ : ಮೃತರ ಸಂಖ್ಯೆ 4ಕ್ಕೆ ಏರಿಕೆ – Vishwanews24
