ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ : ಬಿ ಎಸ್ ಯಡಿಯೂರಪ್ಪ-Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ : ಬಿ ಎಸ್ ಯಡಿಯೂರಪ್ಪ-Vishwanews24

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂಮಿಯನ್ನು ಖರೀದಿಸಲು ಅವಕಾಶವಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು.