ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ : ಡಾ. ಕೆ. ಸುಧಾಕರ್ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ : ಡಾ. ಕೆ. ಸುಧಾಕರ್ – Vishwanews24

ಮೈಸೂರು : ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಸದ್ಯಕ್ಕೆ ರಾಜ್ಯದಲ್ಲಿ ಇಲ್ಲ. ಎರಡನೇ ಮತ್ತು ಮೂರನೇ ಡೋಸ್ ಲಸಿಕೆಯನ್ನು ನಿರ್ಲಕ್ಷಿಸದೆ ಶೀಘ್ರ ಎಲ್ಲರೂ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹಾಗಾಗಿ ಅಲ್ಲಿ ನಿಯಮಗಳನ್ನು ಹೇರಲಾಗುತ್ತಿದೆ. ರಾಜ್ಯದಲ್ಲಿ ಅಂತಹ ಸ್ಥಿತಿ ಈವರೆಗೆ ಬಂದಿಲ್ಲ. ಜನ ನಿರ್ಲಕ್ಷ್ಯ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು. ನಿಯಮಗಳನ್ನು ಬಿಡುಗಡೆ ಮಾಡದಿದ್ದರೂ, ಆರೋಗ್ಯದ ದೃಷ್ಟಿಯಿಂದ ಈಗಿಂದಲೇ ಪಾಲಿಸಿದರೆ ಉತ್ತಮ. ಎಲ್ಲೋ ಬೇರೆ ಕಡೆ ಕೊರೊನಾ ಇರುವುದು, ನಮ್ಮಲ್ಲಿ ಇಲ್ಲ ಎಂಬ ನಿರ್ಲಕ್ಷ್ಯ ಸಲ್ಲ ಎಂದರು.

ಮುಂದಾಗುವ ತೊಂದರೆಗಳನ್ನು ತಪ್ಪಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳಬೇಕು. ಜನಜಂಗುಳಿ ಇರುವೆಡೆಗಳಲ್ಲಿ ಮಾಸ್ಕ್ ಧರಿಸಿಕೊಳ್ಳುವುದು ಉತ್ತಮ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈಗಾಗಲೇ ಲಸಿಕೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರ 5 ರಿಂದ 11 ವರ್ಷದ ಮಕ್ಕಳಿಗೆ ಲಸಿಕೆ ಒದಗಿಸಲು ತಯಾರಿ ನಡೆಸುತ್ತಿದೆ ಎಂದವರು ತಿಳಿಸಿದರು.

ಮಂಗಳೂರು: ಏ. 26 ರಂದು ಖಾಸಗಿ ಕಂಪೆನಿಗಳ ನೇರ ಸಂದರ್ಶನ – Vishwnaews24

Leave a Reply