ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ..  Vishwanews24

Featured, ಉಡುಪಿ, ದಕ್ಷಿಣ ಕನ್ನಡ

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. 

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬಂಟ್ವಾಳ: ಜಾನುವಾರುಗಳ ಚರ್ಮಗಂಟು ರೋಗ..ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24

ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 5 ದಿನ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲೂ ಗುರುವಾರ ರಾತ್ರಿ ಸಾಧಾರಣ ಮಳೆಯಾಗಿದ್ದು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರೆದಿದೆ.

Leave a Reply