ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

Featured, ರಾಜ್ಯ ನ್ಯೂಸ್

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.

ರಾಮ ಮಂದಿರ ದೇಣಿಗೆ ಹಗರಣದಲ್ಲಿ ಕರ್ನಾಟಕದ ನಂಟಿದೆ ಎಂಬ ಅಖಿಲೇಶ್ ಯಾದವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಖಿಲೇಶ್ ಯಾದವ್ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅದ್ರೆ ಬಿಜೆಪಿಗೆ RSSಗೆ ನೇಷನ್ ಫಸ್ಟ್ ಅಲ್ಲ. ಬಿಜೆಪಿ-RSSಗೆ ಡೊನೇಷನ್ ಫಸ್ಟ್ ಎಂದು ಕಿಡಿಕಾರಿದ್ದಾರೆ.

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಯಾರು? ಉದ್ಘಾಟನೆ ಮಾಡಿದ್ದು ಯಾರು? ಸಮಿತಿ ಮಾಡಿದ್ದು ಯಾರು? ಎಲ್ಲಾ ಮಾಡಿದ್ದು ಪ್ರಧಾನಿ ಮೋದಿ ಅವರು. ಈಗ ದೇಣಿಗೆ ಹಗರಣ ಆಗಿದೆ. ಚಿನ್ನ, ಬೆಳ್ಳಿ, ಹಣ ಏನು ಇಲ್ಲ. ಈಗ ಪ್ರಧಾನಿ ಮೋದಿ ಮೌನವಾಗಿ ಇದ್ದಾರೆ ಎಂದಿದ್ದಾರೆ

Leave a Reply