ರಾಮ ಮಂದಿರದ ವಿರುದ್ಧ ತೀರ್ಪು ಬಂದರೆ ನಾನೇ ಮೊದಲು ವಿರೋಧಿಸುತ್ತೇನೆ : ಪೇಜಾವರ ಶ್ರೀ

Featured, ಉಡುಪಿ

ಉಡುಪಿ:ರಾಮ ಮಂದಿರ ನಿರ್ಮಾಣದ ವಿರುದ್ಧವಾಗಿ ಸುಪ್ರಿಂ ತೀರ್ಪು ನೀಡಿದರೆ ನಾನೇ ಮೊದಲು ವಿರೋಧಿಸುತ್ತೇನೆ. ಹಿಂದೂ ಸಮಾಜದವರು ದೇಶಾದ್ಯಂತ ಸಂಘಟಿತರಾಗಬೇಕು ಎಂದು ಪೇಜಾವರ ಶ್ರೀ ಹೇಳಿದರು.

ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳು ಕೋರ್ಟ್ ಗೆ ಯಾಕೆ? ಶಬರಿಮಲೆ ಹಿಂದೂ ಸಮಾಜದ ಕೇಂದ್ರ ಬಿಂದು. ಇಲ್ಲಿನ ಸಂಪ್ರದಾಯ ಬೇರೆ ಯಾವ ಕ್ಷೇತ್ರದಲ್ಲಿಯೂ ಇಲ್ಲ. ಧಾರ್ಮಿಕ ಶಿಸ್ತಿನ ಶಿಕ್ಷಣವನ್ನು ಅಯ್ಯಪ್ಪ ಕಲಿಸಿದ್ದಾನೆ. ನಿಯಮಬದ್ಧ ದೇವಾಲಯದ ವಿಚಾರದಲ್ಲಿ ಆಂದೋಲನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು. ಇಂತಹ ನಿರ್ಣಯವನ್ನು ಸಂತರು, ಭಕ್ತರು ಮಾಡಬೇಕು. ದೇವಸ್ಥಾನಗಳಿಗೆ ದಲಿತರ ಪ್ರವೇಶಕ್ಕೆ ಹಿಂದೂ ಸಮಾಜದ ಬೆಂಬಲವಿದೆ. ಆದರೆ ಕೋರ್ಟ್ ಧಾರ್ಮಿಕ ಪರಿವರ್ತನೆಯನ್ನು ಮಾಡಬಾರದು ಎಂದ ಶ್ರೀಗಳು, ಕೇರಳ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಪ್ರಜೆಗಳನ್ನು ಧಮನ ಮಾಡುತ್ತಿದೆ. ಇತ್ತ ಕೇರಳ ಸರ್ಕಾರವು ಸರ್ವಾಧಿಕಾರಿ ಧೋರಣೆ ತಾಳಿದೆ ಎಂದು ಆರೋಪಿಸಿದರು.

ಪಂದಳ ರಾಜರು, ಭಕ್ತರು, ಅರ್ಚಕರ ಅಭಿಪ್ರಾಯಕ್ಕೆ ಕೋರ್ಟ್ ಮನ್ನಣೆ ನೀಡಲಿ. ಹಿಂದೂ ಸಮಾಜ ಮಹಿಳೆಯರನ್ನು ತಿರಸ್ಕಾರ ಮಾಡಿಲ್ಲ. ನಮ್ಮ ಸಂಪ್ರದಾಯವನ್ನು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಜಾಹೀರಾತುಗಳು