ರಾಮ ರಾಜ್ಯ ಕನಸು ಕಾಂಗ್ರೆಸ್ ಗ್ಯಾರಂಟಿಗಳಿಂದ ನನಸು : ಡಿಕೆ ಶಿವಕುಮಾರ್ – vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ – ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ  ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಉಡುಪಿ: ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ- ಹಣ್ಣುಹಂಪಲು ವಿತರಣೆ -vishwanews24

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್​​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ  ಪ್ರಾಣಪ್ರತಿಷ್ಠೆ – ಶತಮಾನಗಳ ಕನಸು ನನಸಾಗಲು ಕ್ಷಣಗಣನೆ  – vishwanews24

Leave a Reply