ರಾಷ್ಟ್ರೀಯ  ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ : ಸಚಿವೆ ಶೋಭಾ ಕರಂದ್ಲಾಜೆ – Vishwanews24

Featured, ರಾಜ್ಯ ನ್ಯೂಸ್

ರಾಷ್ಟ್ರೀಯ  ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ ಮಾಡಿದ್ದಾರೆ  : ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ಕಾಂಗ್ರೆಸ್ ಹಣ ಪಡೆದು ಬಿಫಾರಂ ವಿತರಣೆ ಮಾಡಿದೆ, ಈ ಹಿನ್ನೆಲೆಯಲ್ಲಿ 224 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಹಣ ಪಡೆದು ಬಿಫಾರಂ ವಿತರಣೆ ಮಾಡಿದ್ದಾರೆ. ಕಾಂಗ್ರೆಸ್ ಪಾರ್ಟಿ ಬಿಫಾರಂಗೆ 2 ಲಕ್ಷ ರೂ. ಸಂಗ್ರಹ ಮಾಡಿರುವ ಬಗ್ಗೆ ಹೇಳಿದ್ದಾರೆ. ಬಿ ಫಾರಂ ಕೊಡುವುದಕ್ಕೆ ಹಣ ಪಡೆಯುವ ಹಾಗಿಲ್ಲ. ಬಿಫಾರಂಗೆ ಹಣ ಪಡೆದರೆ ಕಾನೂನು ಬಾಹಿರವಾಗುತ್ತದೆ. ಇದು ಲಂಚದಿಂದ ಕೂಡಿರುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಬಿಫಾರಂಗೆ ಹಣ ಪಡೆದಿರುವುದರ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಚುನಾವಣಾ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು. 224 ಅಭ್ಯರ್ಥಿಗಳ ಬಿಫಾರಂ ತಿರಸ್ಕರಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮಂಗಳೂರು: ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ : ಸತ್ಯಜಿತ್ ಸುರತ್ಕಲ್ – Vishwanews24

ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗು ಹೆಚ್ಚಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿ ಅಭ್ಯರ್ಥಿಗಳ ನಾಮಪತ್ರದಲ್ಲಿ ದೋಷ ಕಂಡುಬಂದರೆ ಪ್ರತಿಸ್ಪರ್ಧಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿವೆ.

Leave a Reply