ರಾಹುಲ್ ಗಾಂಧಿಗೆ ಏರ್ ಸ್ಟ್ರೈಕ್ ಏನು ಎನ್ನುವುದನ್ನು ತಿಳಿಯಲು ಅವರ ಕೊರಳಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಎಸೆಯಬೇಕು : ಬಿಜೆಪಿ ನಾಯಕಿ – Vishwanews24
ಮುಂಬೈ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ಹೊರಗೆಸೆಯಬೇಕೆಂದು ಮಹಾರಾಷ್ಟ್ರ ಬಿಜೆಪಿ ನಾಯಕಿ ಪಂಕಜ್ ಮುಂಡೆ ವಿವಾದ ಸೃಷ್ಟಿಸಿದ್ದಾರೆ.
ಮಹಾರಾಷ್ಟ್ರದ ಜಲ್ನಾ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಲು ಶ್ರಮಿಸುತ್ತಿದ್ದಾರೆ. ಆದರೆ ಕೆಲ ವಿರೋಧಿಗಳು ಇದನ್ನು ಪ್ರಶ್ನಿಸುತ್ತಾರೆ ಹಾಗೂ ಸಾಕ್ಷಿ ಕೇಳುತ್ತಾರೆ ಎಂದು ಬಾಲಕೋಟ್ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷಿ ಕೇಳುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ಯೋಧರ ಮೇಲೆ ದಾಳಿ ನಡೆದಾಗ ಪ್ರಧಾನಿ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರನ್ನು ಮಟ್ಟಹಾಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದಕ್ಕೆ ಸಾಕ್ಷಿ ಕೇಳುತ್ತಾರೆ. ಅದಕ್ಕೆ ಉತ್ತರವಾಗಿ ನಾನು ಹೇಳುವುದೇನೆಂದರೆ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಎಸೆಯಬೇಕು. ಆಗ ಅವರಿಗೆ ಏರ್ ಸ್ಟ್ರೈಕ್ ಏನು ಎನ್ನುವುದು ತಿಳಿಯುತ್ತದೆ ಎಂದು ಹೇಳಿದರು.
Maharashtra Min Pankaja Munde:We did surgical strike after cowardly attack on our soldiers.Some ppl ask what was surgical strike&what's the evidence?I say we should've attached a bomb to Rahul Gandhi&should have sent him to another country. Then they would have understood.(21.04) pic.twitter.com/KU96yAzoFD
— ANI (@ANI) April 22, 2019
