ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ: ಸಿದ್ದರಾಮಯ್ಯ – vishwanews24
ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಮೋದಿ ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಅವರಿಗೆ ಬಹುಮತ ಬರಲಿಲ್ಲ. ಎನ್ಡಿಎ ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಅವರು ನುಡಿದರು.
ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಮತ ಯಾಚನೆ ಮಾಡಿದರು. ಆದರೆ, ರಾಮ ಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಇದು ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಹೇಳಿದರು.
ಪಕ್ಷದ ಸೋಲಿಗೆ ಕಾರಣವಾದ ನರೇಂದ್ರ ಮೋದಿ ನಾಯಕತ್ವದಿಂದ ಕೆಳಗಿಳಿಯಬೇಕು : ಚಿದಂಬರಂ – vishwanews24
ರಾಹುಲ್ ಗಾಂಧಿ ನಡೆಸಿದಂತಹ ಭಾರತ್ ಜೋಡೋ ಯಾತ್ರೆ, ನ್ಯಾಯ ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿ ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿ ಕೈ ಹಿಡಿದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ – vishwanews24
