ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – vishwanews24

Featured, ರಾಜ್ಯ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು ಅರ್ಜಿ ವಜಾ ಆಗಿದೆ.

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ – vishwanews24

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಎಂಬ ಕಾರಣಗಳನ್ನು ಪವಿತ್ರಾ ಗೌಡ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ ಪವಿತ್ರಾ ಗೌಡ ನೀಡಿರುವ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು. ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್ ಮೆಟ್ಟಿಲೇರಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್ – vishwanews24

Leave a Reply