ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ & ಗ್ಯಾಂಗ್ ಮತ್ತೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ಅವರು ಗುರುವಾರ(ಜು.18ರಂದು) ಆದೇಶ ನೀಡಿದ್ದಾರೆ.
ದೇವರ ಮುಂದೆ ಕೈಮುಗಿದು ಬೆಳ್ಳಿಯ ಕಿರೀಟವನ್ನೇ ಎಗರಿಸಿದ ಕಳ್ಳ.. vishwanews24
ಆ ಮೂಲಕ ದರ್ಶನ್ & ಗ್ಯಾಂಗ್ ಆಗಸ್ಟ್ 1ರವರೆಗೆ ಮತ್ತೆ ಜೈಲಿನಲ್ಲಿ ದಿನ ಕಳೆಯಲಿದ್ದಾರೆ. ದರ್ಶನ್, ಪವಿತ್ರಾ ಗೌ ಡ ಸೇರಿ 17 ಮಂದಿಯನ್ನು ಗುರುವಾರ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇನ್ನು ದರ್ಶನ್ ಅವರಿಗೆ ಜೈಲೂಟ ಸೇವಿಸಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ತಮಗೆ ಮನೆಯೂಟ ಬೇಕು. ಮಲಗಲು ಹಾಸಿಗೆ ಬೇಕು, ಓದಲು ಪುಸ್ತಕಗಳನ್ನು ನೀಡಬೇಕೆಂದು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಶಿರೂರು ಗುಡ್ಡ ಕುಸಿತ ಪ್ರಕರಣ : ಬಾಲಕಿ ಸಹಿತ ಇಬ್ಬರ ಮೃತದೇಹ ಪತ್ತೆ ; ಮೃತರ ಸಂಖ್ಯೆ ಆರಕ್ಕೆ ಏರಿಕೆ – vishwanews24
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಶುಕ್ರವಾರ (ಜು.19ಕ್ಕೆ) ಅಂದರೆ ನಾಳೆಗೆ ಮುಂದೂಡಿದೆ.
