ಲಷ್ಕರ್ ಕಮಾಂಡರ್ ಮತ್ತು ಪಾಕ್ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ ಭದ್ರತಾ ಪಡೆ -Vishwanews24
ಲಷ್ಕರ್ ಕಮಾಂಡರ್ ಮತ್ತು ಪಾಕ್ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ ಭದ್ರತಾ ಪಡೆ -Vishwanews24
ಶ್ರೀನಗರ: ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಉನ್ನತ ದರ್ಜೆಯ ಕಮಾಂಡರ್ ಮತ್ತು ಪಾಕಿಸ್ಥಾನಿ ಉಗ್ರನೋರ್ವನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.
ಶ್ರೀನಗರದ ಪಾರಿಂಪೊರಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಲವು ಮಂದಿ ನಾಗರಿಕರು ಮತ್ತು ಸೈನಿಕರ ಸಾವಿಗೆ ಕಾರಣನಾಗಿದ್ದ ಲಷ್ಕರ್ ಕಮಾಂಡರ್ ನದೀಂ ಅಬ್ರಾರ್ ಮತ್ತು ಪಾಕಿಸ್ಥಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ.ಈ ಪಾಕಿಸ್ಥಾನಿ ಉಗ್ರ ನದೀಂ ಅಬ್ರಾರ್ ಗೆ ಸಹಾಯಕನಾಗಿದ್ದ.
ಎರಡು ಎಕೆ -47 ರೈಫಲ್ಗಳು ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ಹಲವಾರು ಆಯುಧಳನ್ನು ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಹೆದ್ದಾರಿಯ ಮೇಲೆ ದಾಳಿ ನಡೆಸುವ ಬಗ್ಗೆ ಖಚಿತ ಮಾಹಿತಿ ಇಲಾಖೆಗೆ ಸಿಕ್ಕಿತ್ತು.ಈ ಮಾಹಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯಿಂದ ಜಂಟಿಯಾಗಿ ಹೆದ್ದಾರಿಯಲ್ಲಿ ನಾಕಾ ಬಂದಿ ಹಾಕಲಾಯಿತು.
